ಹೊನ್ನಾವರ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಬೈಕ್‌ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಳದಿಪುರದ ಅಗ್ರಹಾರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಕುಮಟಾ ಭಾಗದಿಂದ ಹೊನ್ನಾವರಕ್ಕೆ ಬರುತಿದ್ದ ಬೈಕ್‌ ಮತ್ತು ಹೊನ್ನಾವರ ಭಾಗದಿಂದ ಕುಮಟಾ ಭಾಗಕ್ಕೆ ತೆರಳುತಿದ್ದ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಬೈಕ್‌ ಸವಾರ ಹೊಸಳ್ಳಿಯ ಶಂಕರ್ ಭಟ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಬೈಕ್‌ ಸವಾರನ ಅತಿ ವೇಗದ ಚಾಲನೆ ಹಾಗೂ ಸಂಚಾರಿ ನಿಯಮ ಮೀರಿ ವಿರುದ್ಧ ದಿಕ್ಕಿನಲ್ಲಿ ಬೈಕ್ ಚಾಲನೆ ಮಾಡಿರುವುದೇ ಬಸ್ ಮತ್ತು ಬೈಕ್ ನಡುವೆ ಅಪಘಾತಕ್ಕೆ ಕಾರಣವಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸಮುದಾಯ ಭವನ‌ ನಿರ್ಮಾಣಕ್ಕೆ ರಾಘವೇಶ್ವರ ಶ್ರೀಗಳಿಂದ ಭೂಮಿ ಪೂಜೆ