ಬೆಂಗಳೂರು/ಭಟ್ಕಳ: ಆಂಬ್ಯುಲೆನ್ಸ್ ಅಪಘಾತದಿಂದ (Ambulance collision) ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಬೆಂಗಳೂರಿನ (Bengaluru) ಶಾಂತಿನಗರದ ಕೆ ಎಚ್ ರಸ್ತೆಯ ಸಂಗೀತಾ ಸಿಗ್ನಲ್ ಬಳಿ ಸಂಭವಿಸಿದೆ. ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ‌ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದ್ದು, ದ್ವಿಚಕ್ರ ವಾಹನದಲ್ಲಿದ್ದ ಮೃತರನ್ನು ಇಸ್ಮಾಯಿಲ್ ನಾಥರ್ ದಾಬಾಪು (40) ಮತ್ತು ಅವರ ಪತ್ನಿ ಸಮೀನ್ ಬಾನು ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಬಂಡರ್ ರೋಡ್ 2ನೇ ಕ್ರಾಸ್ ಹಾಗೂ 5ನೇ ಕ್ರಾಸ್ ನಿವಾಸಿಗಳಾಗಿದ್ದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ರಿಚ್ಮಂಡ್ ರಸ್ತೆಯ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಚಾಲಕ, ಊರ್ವಶಿ ಚಿತ್ರಮಂದಿರ ಕಡೆಯಿಂದ ವಿಲ್ಸನ್ ಗಾರ್ಡನ್ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪಘಾತವೆಸಗಿದ್ದಾನೆ (Ambulance collision). ಅಲ್ಲದೆ ಆಂಬ್ಯುಲೆನ್ಸ್ ಕೆಳಗೆ ಸಿಲುಕಿದ್ದ ದ್ವಿಚಕ್ರ ವಾಹನವನ್ನು 20- 30 ಮೀಟರ್ ಎಳೆದುಕೊಂಡು ಚಲಾಯಿಸಿದ್ದಾನೆ. ಬಳಿಕ ಟ್ರಾಫಿಕ್ ಪೊಲೀಸ್ ಚೌಕಿಗೆ ಗುದ್ದಿ ಆಂಬ್ಯುಲೆನ್ಸ್ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳೀಯರು ಬಂದು ಆಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಆಂಬ್ಯುಲೆನ್ಸ್ ಅಡಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.

ಇದನ್ನು ಓದಿ: whiteboard taxi/ ವೈಟ್‌ಬೋರ್ಡ್ ಟ್ಯಾಕ್ಸಿ ವಿರುದ್ಧ ಆಕ್ರೋಶ

ಟ್ರಾಫಿಕ್ ಪೊಲೀಸ್ ಚೌಕಿಗೆ ಗುದ್ದುವ ಮುನ್ನ ಆಂಬ್ಯುಲೆನ್ಸ್ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಅದರಲ್ಲಿದ್ದ ಸವಾರರಾದ ರಿಯಾನ್ ಹಾಗೂ ಸಿದ್ದಿಕ್ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಟ್ರಾಫಿಕ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಚಾಲಕ ಅಶೋಕ್, ಅಪಘಾತದ ನಂತರ ಪರಾರಿಯಾಗಿದ್ದರೂ, ಭಾನುವಾರ ಬೆಳಿಗ್ಗೆ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಘಟನೆಯ ಕುರಿತು ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿ: precautionary measures/ ಆರೋಪಿ ವಿರುದ್ಧ ಮುಂಜಾಗ್ರತಾ ಕ್ರಮ ಜರುಗಿಸಿದ ಪೊಲೀಸರು, ಏನಿದು ಗೊತ್ತಾ?

ಈ ದಂಪತಿಗಳ ಪಾರ್ಥಿವ ಶರೀರವನ್ನು ಭಾನುವಾರ ರಾತ್ರಿ ಭಟ್ಕಳಕ್ಕೆ ತರಲಾಗಿದ್ದು, ಆಪ್ತರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ದಂಪತಿಗಳು ಒಬ್ಬ ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇದನ್ನು ಓದಿ: University Rank/ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಮತ್ತೊಂದು ರ‍್ಯಾಂಕ್

ಶನಿವಾರ ರಾತ್ರಿ ತನಕ ಮಾತನಾಡುತ್ತಿದ್ದವರು, ಭಾನುವಾರದ ಬೆಳಿಗ್ಗೆ ಶವಪೆಟ್ಟಿಗೆಯಲ್ಲಿದ್ದಾಗ ಊರೇ ಶೋಕಮಗ್ನವಾಯಿತು. ಬಂದರ್ ರಸ್ತೆಯ ಅಂಗಳದಲ್ಲಿ ಕಣ್ಣೀರು ತಡೆಹಿಡಿಯಲಾಗದ ವಾತಾವರಣ. ಜೀವ ಉಳಿಸಬೇಕಾದ ಆಂಬ್ಯುಲೆನ್ಸ್ ಜೀವ ಕಸಿದುಕೊಂಡಿದೆ. ವೇಗದ ಅಜಾಗರೂಕತೆಗೆ ಬಲಿಯಾದ ಒಂದು ಕುಟುಂಬ, ಮೂವರು ಮಕ್ಕಳು ತಂದೆ-ತಾಯಿಯಿಲ್ಲದ ಮೌನವಾಗಿದೆ.

ಇದನ್ನು ಓದಿ: WordPress Campus Connect/ ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಪ್ರೇರಣೆ