ಕಾರವಾರ (Karwar) : ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಚನ್ನಪಟ್ಟಣ ಮಾರುತಿ ದೇವರ ಜಾತ್ರಾ ಮಹೋತ್ಸವ (Bhatkal Jathre) ಏ. 6 ರಂದು ನಡೆಯಲಿದೆ. ತನ್ನಿಮಿತ್ತ ಭಟ್ಕಳ ಪಟ್ಟಣದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ (liquor ban).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಏ.೫ ರಂದು ಬೆಳಗ್ಗೆ ೬ ಗಂಟೆಯಿಂದ ಏ.೬ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ (liquor ban). ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : Bangaramakki/ “ಭಕ್ತರ ಪಾಲಿನ ಬಂಗಾರವೇ ಬಂಗಾರಮಕ್ಕಿ”