ಭಟ್ಕಳ : ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ (Kannada Sahitya Parishad) ಪರಿಷತ್ತಿನ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wodeyar) ಜನ್ಮ ದಿನಾಚರಣೆಯನ್ನು (birth anniversary celebration) ಇಲ್ಲಿನ ಚಿತ್ರಾಪುರದಲ್ಲಿರುವ ಸಾಹಿತಿ ಶ್ರೀಧರ್ ಶೇಟ್ ಅವರ ನಿವಾಸ ಕಲಾಸಿರಿಯಲ್ಲಿ ಆಚರಿಸಲಾಯಿತು. ನಾಲ್ವಡಿ ಕ್ರಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಮಾನಾಸುತ ಶಂಭು ಹೆಗಡೆ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು (birth anniversary celebration) ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಘಟಕ ತಪ್ಪದೆ ಆಚರಿಸುತ್ತಾ ಬಂದಿರುವುದು ಸಂತಸದ ಸಂಗತಿ. ಕನ್ನಡ ನಾಡು ನುಡಿಯನ್ನು ಕಟ್ಟುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕೊಡುಗೆಗಳನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕು. ಹಿಂದಿನವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಹೇಳುತ್ತಾ, ಸ್ವರಚಿತ ಕವಿತೆ ವಾಚಿಸಿದರು.

ಇದನ್ನೂ ಓದಿ : Table Tennis/ ಸುಧೀಂದ್ರ ಕಾಲೇಜಿನಲ್ಲಿ ಟೇಬಲ್‌ ಟೆನ್ನಿಸ್‌ ಪಂದ್ಯಾವಳಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ,  ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿಗೆ ಪ್ರಾತಃ ಸ್ಮರಣೀಯರು. ಈ ನಾಡಿನ ಬೌದ್ಧಿಕ ಪ್ರಗತಿಗಾಗಿ ಮೈಸೂರು ವಿಶ್ವವಿದ್ಯಾಲಯ (Mysore University), ಭೌತಿಕ ಪ್ರಗತಿಗಾಗಿ ಕೃಷ್ಣರಾಜಸಾಗರ ಅಣೆಕಟ್ಟು (Krishnarajasagar Dam), ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಗತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದರು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಉದ್ಯೋಗಿಕವಾಗಿ, ಆರ್ಥಿಕವಾಗಿ ಈ ನಾಡನ್ನು ಕಟ್ಟುವಲ್ಲಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹಳ ದೊಡ್ಡದು ಎಂದರು.

ಇದನ್ನೂ ಓದಿ : Murdeshwar/ ಗಾಯಾಳು ವಿರುದ್ಧವೇ ದೂರು ದಾಖಲು !

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಎಂ.ಡಿ. ಪಕ್ಕಿ ಸಾಂದರ್ಭಿಕವಾಗಿ ಮಾತನಾಡಿದರು. ಸಾಹಿತಿ ಶ್ರೀಧರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು. ಕವಯಿತ್ರಿ ಶಿಕ್ಷಕಿ ಹೇಮಲತಾ ರಾವ್ ವಂದಿಸಿದರು. ಕಾರ್ಯಕ್ರಮದಲ್ಲಿ ಯುವ ಕವಿ ನಂದನ ನಾಯ್ಕ, ಶ್ರೀಶಾ ಶ್ರೀಧರ ಶೇಟ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : missing/ ಅಳ್ವೆಕೋಡಿ ಬಂದರಿನಲ್ಲಿ ಕಾರು ಪತ್ತೆ; ವ್ಯಕ್ತಿ ನಾಪತ್ತೆ