ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆ (Mari Jathre) ಬುಧವಾರದಂದು ನಸುಕಿನ ಜಾವ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆಗೆ ಮಾರಿಯಮ್ಮನ ಮೂರ್ತಿ (Goddess Mariyamma) ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿದೆ. ಬುಧವಾರದಂದು ಮುಂಜಾನೆ ಕರೆತರಲಾದ ಮಾರಿದೇವಿಯ ಮೂರ್ತಿಯನ್ನು ಮಾರಿಕಾಂಬಾ ದೇವಿಯ ಎದುರಿನ ಪ್ರಾಂಗಣದ ಗರ್ಭಗುಡಿಯ ಹೊರಗಡೆ ಮಾರಿದೇವಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ದೇವಿ ದರ್ಶನಕ್ಕೆ ಉದ್ದದ ಸಾಲು : ಎರಡು ದಿವಸ ನಡೆಯುವ ಈ ಜಾತ್ರೆಯಲ್ಲಿ ಮೊದಲನೇ ದಿನವಾದ ಬುಧವಾರ ಪರ ಊರಿನವರು, ಗ್ರಾಮೀಣ ಭಾಗದವರು ತಮ್ಮ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ. ಎರಡನೇ ದಿನವಾದ ಗುರುವಾರದಂದು ಸ್ಥಳೀಯರು ಅಂದರೆ ನಗರ ಭಾಗದವರು ಹಬ್ಬ ಆಚರಿಸುತ್ತಾರೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಭಟ್ಕಳದ ಮಾಜಿ ಶಾಸಕ ಸುನೀಲ ನಾಯ್ಕ ಮತ್ತಿತರರು ದೇವಿಯ ದರ್ಶನ ಪಡೆದರು.
Mari Jathre begins/ ಗದ್ದುಗೆ ಏರಿದ ಮಾರಿಯಮ್ಮ
ಸಂಭ್ರಮದಿಂದ ಜರುಗುತ್ತಿರುವ ಈ ಜಾತ್ರೆಯಲ್ಲಿ ಮೊದಲ ದಿನ ಅಕ್ಕಪಕ್ಕದ ತಾಲೂಕಿನಿಂದಲೂ ಭಕ್ತರು ಬಂದು ದೇವಿಯ ಆಶೀರ್ವಾದ ಪಡೆದರು. ಉದ್ದದ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದರ್ಶನ ಪಡೆದರು. ಹಣ್ಣು ಕಾಯಿ ಜೊತೆಗೆ ಹರಕೆಯನ್ನು ತೀರಿಸಿ ಭಕ್ತರು ಕೃತಾರ್ಥರಾದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತರ ದರ್ಶಕ್ಕೆ ಉತ್ತಮ ವ್ಯವಸ್ಥೆ ಮಾಡಿಕೊಟ್ಟಿರುವುದರಿಂದ ಮಾರಿ ದೇವಿ ದರ್ಶನಕ್ಕೆ ಯಾವುದೇ ತೊಂದರೆಯಾಗಿಲ್ಲ.
Opportunity/ ಗ್ರಾಮ ಒನ್ ಕೇಂದ್ರ ಆರಂಭಿಸಲು ಅವಕಾಶ
ಬೆಳ್ಳಿ ಕಣ್ಣು, ಹೂವಿನ ಟೋಪಿ ಹರಕೆ: ಮಾರಿರೂಪದಲ್ಲಿ ಕುಳಿತಿರುವ ಈ ದೇವಿಗೆ (Goddess Mariyamma) ಭಕ್ತರು ಕಣ್ಣು ಬೇನೆ, ಸಿಡುಬು ಹಾಗು ಇನ್ನಿತರ ಸಾಂಕ್ರಾಮಿಕ ರೋಗಗಳು ಬಾರದೇ ತಡೆಗಟ್ಟುವಂತೆ ಭಕ್ತಿಯಿಂದ ಹೂವಿನ ಟೋಪಿ, ಎಲೆಯಿಂದ ಮಾಡಿದ ಹೂ ಕಟ್ಟು, ಬೆಳ್ಳಿಯ ಕಣ್ಣುಗಳನ್ನು ಅರ್ಪಿಸಿ ಕಾಪಾಡುವಂತೆ ಮೊರೆ ಇಡುವುದು ಈ ಜಾತ್ರೆಯ ವಿಶೇಷತೆಗಳಲ್ಲಿ ಒಂದಾಗಿದೆ. ಮೊದಲ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹರಕೆ ತೀರಿಸಿದ್ದಾರೆ. ತಮಗೆ ಬಂದ ಕಷ್ಟ ಕಾರ್ಪಣ್ಯಗಳು ದೂರಾಗಲಿ ಎಂದು ಹರಿಕೆ ಹೊತ್ತ ಭಕ್ತರು, ವಾರ್ಷಿಕ ಜಾತ್ರೆಯಲ್ಲಿ ಹರಿಕೆ ತೀರಿಸುವುದು ವಾಡಿಕೆಯಾಗಿದೆ.
Retirement/ ೩೬ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಂಚೆ ಮೇಲ್ವಿಚಾರಕ
ಬಿಗಿ ಬಂದೋಬಸ್ತ್: ಮಾರಿ ಜಾತ್ರೆ (Mari Jathre) ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಗುರುವಾರ ಸಂಜೆ ೪ ಗಂಟೆ ಸುಮಾರಿಗೆ ಮಾರಿಯಮ್ಮನ ವಿಸರ್ಜನೆ ನಡೆಯಲಿದ್ದು, ಮೆರವಣಿಗೆಯ ಮಾರ್ಗ ಮತ್ತು ಜಾಲಿ ಕೋಡಿ ತೀರದಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.
polling stations/ ಭಟ್ಕಳ ಸಹಿತ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಲಿರುವ ಮತಗಟ್ಟೆಗಳು
ಜಿಲ್ಲೆಯಲ್ಲಿಯೇ ಅತ್ಯಂತ ವಿಜೃಂಭಣೆಯಿಂದ ಅದ್ದೂರಿಯಾಗಿ ನಡೆಯುವ ಮಾರಿ ಜಾತ್ರೆಗಳಲ್ಲಿ ಭಟ್ಕಳ ತಾಲೂಕಿನ ಮಾರಿ ಜಾತ್ರೆ ಸಹ ಒಂದು. ಮಾರಿಜಾತ್ರೆ ಗ್ರಾಮದೇವತೆಯ ಉತ್ಸವವಾಗಿದ್ದು, ಹಿಂದುಳಿದವರ ಹಾಗೂ ಪರಿಶಿಷ್ಠ ಜಾತಿ ಪಂಗಡದವರ ಮುಂದಾಳತ್ವದಲ್ಲಿ ನಡೆಯುವ ವಿಶಿಷ್ಠ ಜಾತ್ರೆಯಿದು.


