ದಾವಣಗೆರೆ (Davanagere) : ಆರ್ಬಿಟಲ್ ಅಥೆರೆಕ್ಟಮಿ ಎಂಬ ಎರಡು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸಿ ಇಲ್ಲಿನ ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ಸಾಧನೆಗೈದಿದ್ದಾರೆ.ವಿಶೇಷವೆಂದರೆ ಇದು ಮಧ್ಯ ಕರ್ನಾಟಕದಲ್ಲಿ ನೇರವೇರಿಸಿದ ಪ್ರಪ್ರಥಮ ಶಸ್ತ್ರಚಿಕಿತ್ಸೆಯಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಹಿರಿಯ ಹೃದ್ರೋಗ ತಜ್ಞ ಡಾ. ಧನಂಜಯ ಆರ್.ಎಸ್ ಹಾಗೂ ಅವರ ತಂಡ ಈ ಚಿಕಿತ್ಸೆಯನ್ನು ನೀಡಿದ್ದಾರೆ. ಇಬ್ಬರೂ ರೋಗಿಗಳು ಸಂಪೂರ್ಣ ಗುಣಮುಖರಾಗಿ ಇತ್ತೀಚೆಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಇದನ್ನು ಓದಿ : ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ
ಈ ಚಿಕಿತ್ಸೆಯಲ್ಲಿ ಡಾ. ಧನಂಜಯ ಅವರ ತಂಡ ಇಬ್ಬರೂ ರೋಗಿಗಳು ಪರಿಧಮನಿಯ ಅಪಧಮನಿಗಳಲ್ಲಿ ( coronary arteries) ಕ್ಯಾಲ್ಸಿಯಂ ಶೇಖರಣೆಗೊಂಡು ರಕ್ತ ಪರಿಚಲನೆ ಸುಗಮವಾಗದೇ ಹೃದಯ ಬೇನೆಯಿಂದ ಬಳಲುತ್ತಿದ್ದರು. ಇದನ್ನು ಅತ್ಯಂತ ನವೀನವಾದ ತಂತ್ರಜ್ಞಾನ ಆರ್ಬಿಟಲ್ ಅಥೆರೆಕ್ಟಮಿ ಶಸ್ತ್ರಚಿಕಿತ್ಸೆ ಮೂಲಕ ಪರಿಹರಿಸಿದ್ದಾರೆ.
ವಿಡಿಯೋ ಸಹಿತ ಇದನ್ನು ಓದಿ : ಶೇಡಿ ಮರ ಏರಿದ ಸಹಸ್ರಾರು ಭಕ್ತರು
ಏನಿದು ಚಿಕಿತ್ಸೆ? : ಆರ್ಬಿಟಲ್ ಅಥೆರೆಕ್ಟಮಿಯು ಆಂಜಿಯೋಪ್ಲಾಸ್ಟಿಗಳಿಗಾಗಿ ಕ್ಯಾಲ್ಸಿಯಂ ಶೇಖರಣೆಗೊಂಡ ಅಪಧಮನಿಗಳನ್ನು ಸ್ವಚ್ಛಗೊಳಿಸಲು ಉಪಯೋಗಿಸುವ ತಂತ್ರಜ್ಞಾನವಾಗಿದೆ. ಇದರಲ್ಲಿ ಉಪಯೋಗಿಸುವ ಸಾಧನ ವಜ್ರದ ತುದಿ ಹೊಂದಿದ್ದು, ಪ್ರತಿ ಸೆಕೆಂಡಗೆ ೮೦,೦೦೦ ದಿಂದ ೧,೨೦,೦೦೦ ಸಾರಿ ತಿರುಗುವ ಮೂಲಕ, ಅಪಧಮನಿಗಳಲ್ಲಿ ಜಮಾವಣೆಗೊಂಡ ಕ್ಯಾಲ್ಸಿಯಂನ್ನು ತೆಗೆದು ಹಾಕುತ್ತದೆ. ಇದರಿಂದ ಸ್ಟೆಂಟ್ ಹಾಕಲು ಇರುವ ಅಡೆತಡಗಳು ದೂರವಾಗಿ, ಸ್ಟೆಂಟ್ ಹಾಕಿದ ನಂತರ ಹೃದಯಕ್ಕೆ ರಕ್ತಸಂಚಾರ ಸರಾಗವಾಗಿ ತೊಂದರೆ ದೂರವಾಗುತ್ತದೆ.
ಇದನ್ನೂ ಓದಿ: ‘ಶಿರಾಲಿಯ ಶಕ್ತಿ – ಶ್ರೀ ಹಾದಿ ಮಾಸ್ತಿ’ ಪುಸ್ತಕ ಲೋಕಾರ್ಪಣೆ
ಸುಮಾರು ೭೪ ವರ್ಷದ ಹಿರಿಯರೊಬ್ಬರು ತೀವ್ರವಾದ ಹೃದಯ ಬೇನೆಯಿಂದ ದಾವಣಗೆರೆಯ (Davanagere) ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ ವೈದ್ಯರು ಇವರ ಹೃದಯದ ಪರಿಧಮನಿಯ ಅಪಧಮನಿಗಳಲ್ಲಿ ( coronary arteries) ಕ್ಯಾಲ್ಸಿಯಂ ಶೇಖರಣೆಗೊಂಡು ರಕ್ತ ಸಂಚಾರ ತೊಡಕಾಗುತ್ತಿರುವುದು ಎಂದು ತಿಳಿದು ಬಂದಿದೆ.
ಇದನ್ನು ಓದಿ : Readers letter/ ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ತಾತ್ಸಾರವೇಕೆ?
ಇದೇ ವೇಳೆ ೬೬ ವರ್ಷದ ಹಿರಿಯ ವ್ಯಕ್ತಿಯು ಸಹ ಇದೇ ತರಹದ ಹೃದಯ ಬೇನೆಯೊಂದಿಗೆ ಆಸ್ಪತ್ರೆಗೆ ಬಂದಿದ್ದರು, ಇವರನ್ನು ಸಹ ತಪಾಸಣೆಗೆ ಒಳಪಡಿಸಿದಾಗ ಇವರಿಗೂ ಸಹ ೭೪ ವರ್ಷದ ರೋಗಿ ತರಹ ಕ್ಯಾಲ್ಸಿಯಂ ಆರ್ಟರಿಗಳಲ್ಲಿ ಗಟ್ಟಿಯಾಗಿದೆ ಎಂದು ತಿಳಿದು ಬಂದಿದೆ.
ವಿಡಿಯೋ ಸಹಿತ ಇದನ್ನು ಓದಿ : Under Pass/ ಗ್ರಾಮಸ್ಥರಿಂದ ಸಂಸದ ಕಾಗೇರಿ ತರಾಟೆಗೆ
ಈ ಇಬ್ಬರೂ ರೋಗಿಗಳಿಗೆ, ಸುಗಮ ರಕ್ತ ಸಂಚಾರಕ್ಕೆ ಕ್ಯಾಲ್ಸಿಯಂ ಶೇಖರಣೆಯಿಂದ ಸ್ಟೆಂಟ್ ಅಳವಡಿಸುವುದು ಕ್ಲಿಷ್ಟಕರವಾಗಿತ್ತು. ಇದನ್ನು ಮನಗಂಡ ವೈದ್ಯರು ಆರ್ಬಿಟಲ್ ಅಥೆರೆಕ್ಟಮಿ ಎಂಬ ವಿನೂತನ ಮತ್ತು ಅತ್ಯಂತ ಸುಧಾರಿತ ತಂತ್ರಜ್ಞಾನದ ಮೂಲಕ ಆರ್ಟರಿಗಳಲ್ಲಿ ಶೇಖರಣೆಗೊಂಡು ಗಟ್ಟಿಯಾಗಿದ್ದ ಕ್ಯಾಲ್ಸಿಯಂ ಅನ್ನು ತೆಗೆದು ಸ್ಟೆಂಟ್ ಅಳವಡಿಸಿ ರೋಗಿಗಳ ಜೀವವನ್ನು ಕಾಪಾಡಿದ್ದಾರೆ.
ವಿಡಿಯೋ ಸಹಿತ ಇದನ್ನು ಓದಿ : Mari Jathre/ ಮನೆಯ ಹಬ್ಬವಾಗಿಸುವ ಮಾರಿ ಜಾತ್ರೆ
ಈ ನವೀನ ತಂತ್ರಜ್ಞಾನದ ಬಗ್ಗೆ ಮಾತನಾಡಿದ ಡಾ. ಧನಂಜಯ “ ಆರ್ಬಿಟಲ್ ಅಥೆರೆಕ್ಟಮಿ ಎಂಬ ವಿನೂತನ ಚಿಕಿತ್ಸೆ ನಮ್ಮ ಮಧ್ಯ ಕರ್ನಾಟಕದ ಜನರಿಗೆ ಈಗ ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದರು.
ವಿಡಿಯೋ ಸಹಿತ ಇದನ್ನು ಓದಿ: Mari Jathre/ ಅಳಿವೆಕೋಡಿಯಲ್ಲಿ ಮಾರಿ ಜಾತ್ರೆ ವೈಭವ
ಇತ್ತೀಚೆಗೆ ನಾವು ಈ ಚಿಕಿತ್ಸೆಯನ್ನು ಇಬ್ಬರು ರೋಗಿಗಳಿಗೆ ನೀಡಿದ್ದೇವೆ, ಚಿಕಿತ್ಸೆ ಬಹಳ ಪರಿಣಾಮಕಾರಿಯಾಗಿದೆ. ಅಲ್ಲದೆ ಬಹಳ ಬೇಗ ರೋಗಿಗಳು ಸಂಪೂರ್ಣವಾಗಿ ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಎಸ್ ಎಸ್ ನಾರಾಯಣ ಹೆಲ್ತ್ (Narayan health) ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೃದಯರೋಗಕ್ಕೆ ಸಂಬಂಧಿಸಿದ ಎಲ್ಲ ತರಹದ ಸಮಸ್ಯೆಗಳಿಗೆ ಅತ್ಯಾಧುನಿಕ ಚಿಕಿತ್ಸೆ ಲಭ್ಯವಿದೆ. ಮದ್ಯ ಕರ್ನಾಟಕದ ಜನರಿಗೆ ವಿಶ್ವದರ್ಜೆಯ ಅತ್ಯಾಧುನಿಕ ಚಿಕಿತ್ಸೆ ನೀಡುವ ನಾರಾಯಣ ಹೆಲ್ತ್ ನ ಪ್ರಯತ್ನ ನಿರಂತರವಾಗಿರಲಿದೆ” ಎಂದರು.
ವಿಡಿಯೋ ಸಹಿತ ಇದನ್ನು ಓದಿ : Kannada cinema/ ಭಟ್ಕಳ, ಮುರುಡೇಶ್ವರದಲ್ಲಿ ಕೋಣ ಚಿತ್ರೀಕರಣ