ಭಟ್ಕಳ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದೆ. ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ದುರ್ಬಳಕೆ ತಡೆಗಟ್ಟಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ಇದರ ಭಾಗವಾಗಿ ಭಟ್ಕಳದಲ್ಲೂ ಹೋಟೆಲ್‌ಗಳ ತಪಾಸಣೆ (Hotels inspected) ಆರಂಭಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇರಾನ್ ಮೇಲೆ ಅಮೆರಿಕಾ–ಇಸ್ರೇಲ್ ಜಂಟಿ ದಾಳಿ ಹಾಗೂ ಅದಕ್ಕೆ ಇರಾನ್ ಪ್ರತಿಕಾರದ ಕ್ರಮದಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಭಾರತಕ್ಕೆ ಕಚ್ಚಾ ತೈಲ ಸಾಗಾಟದ ಪ್ರಮುಖ ಮಾರ್ಗವಾಗಿರುವ ಹೊರ್ಮುಜ್ ಜಲಸಂಧಿಯಲ್ಲಿ ಉಂಟಾದ ಅಸ್ಥಿರತೆಯಿಂದ ತೈಲ ಹಾಗೂ ಅನಿಲ ಪೂರೈಕೆಗೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ (central government) ಸೂಚನೆಯಂತೆ ರಾಜ್ಯ ಸರ್ಕಾರ (State government) ಎಲ್‌ಪಿಜಿ ಸಿಲಿಂಡರ್‌ಗಳನ್ನು (LPG cylinder) ಗೃಹ ಬಳಕೆದಾರರಿಗೆ ಆದ್ಯತೆಯಾಗಿ ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ರಾಜ್ಯ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ ಅವರು ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ.

Traffic changes/ ಭಟ್ಕಳ ರಂಜಾನ್ ಪೇಟೆಯ ಹಿನ್ನೆಲೆ ರಸ್ತೆಗಳಲ್ಲಿ ಸಂಚಾರ ಬದಲಾವಣೆ 

ಸೂಚನೆ ಅನ್ವಯ ವಿವಿಧ ತಾಲೂಕುಗಳ ತಹಸೀಲ್ದಾರರು ಕಾರ್ಯಾಚರಣೆ ಆರಂಭಿಸಿದ್ದು, ಭಟ್ಕಳದಲ್ಲಿ ಬುಧವಾರ ಸಂಜೆಯಿಂದಲೇ ಹೋಟೆಲ್ ಅಡುಗೆ ಕೋಣೆಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ (Hotels inspected). ಅಡುಗೆ ಅನಿಲದ ದುರ್ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಶಾಲೆ, ಅಂಗನವಾಡಿ ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಅಡುಗೆ ಅನಿಲ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಭಟ್ಕಳ ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ ತಿಳಿಸಿದ್ದಾರೆ.

MDS exam/ ದಂತ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ಭಟ್ಕಳದ ಯುವಕಗೆ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ‍್ಯಾಂಕ್

ಅಕ್ರಮಕ್ಕೆ ಕಡಿವಾಣ: ಅಗತ್ಯ ವಸ್ತು ಪೂರೈಕೆ ಕಾಯ್ದೆಯಡಿ ಗೃಹ ಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ವಾಣಿಜ್ಯ ಬಳಕೆಗೆ ಸರಬರಾಜು ಮಾಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು, ಕಡಿಮೆ ಪ್ರಮಾಣದಲ್ಲಿ ರೀಫಿಲ್ಲಿಂಗ್ ಮಾಡಿ ವಿತರಿಸುವುದು ಹಾಗೂ ಬೇರೆ ರಾಜ್ಯಗಳಿಗೆ ಅಕ್ರಮ ಸಾಗಾಣಿಕೆ ಮಾಡುವುದನ್ನು ತಡೆಗಟ್ಟಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Annual General Meeting/ ನಿವೃತ್ತ ಸರಕಾರಿ ನೌಕರರ ಸಂಘದ “ವಾರ್ಷಿಕ ಮಹಾಸಭೆ”

ಹೋಟೆಲ್ ಉದ್ಯಮಕ್ಕೆ ಸಂಕಷ್ಟ: ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆಯಿಂದ ರಾಜ್ಯಾದ್ಯಂತ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕೆಲವು ಹೋಟೆಲ್‌ಗಳು ಸೌದೆ ಒಲೆ ಬಳಕೆಗೆ ಮುಂದಾಗಿದ್ದರೆ, ಇನ್ನೂ ಕೆಲವು ಹೋಟೆಲ್‌ಗಳು ಆಹಾರ ಪಟ್ಟಿ (ಮೆನು) ಕಡಿತ ಮಾಡಿಕೊಳ್ಳುತ್ತಿವೆ. ಪರಿಸ್ಥಿತಿ ಇದೇ ರೀತಿಯಾಗಿ ಮುಂದುವರಿದರೆ ಹೋಟೆಲ್‌ಗಳನ್ನು ಬಂದ್ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದು ಕೆಲವು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

Ramadan stalls/ ೩೬ ರಂಜಾನ್ ಮಳಿಗೆಗೆ ೧೩೫೯ ಅರ್ಜಿ: ಲಾಟರಿ ಮೂಲಕ ಹಂಚಿಕೆ