ಭಟ್ಕಳ (Bhatkal): ತಾಲೂಕಿನ ಇತಿಹಾಸ ಪ್ರಸಿದ್ಧ ಸೋಡಿಗದ್ದೆ (Sodigadde) ಶ್ರೀ ಮಹಾಸತಿ (Mahasati) ದೇವಿಯ ಜಾತ್ರಾ ಮಹೋತ್ಸವ ಗುರುವಾರದಿಂದ ವಿಜೃಂಭಣೆಯಿಂದ ನಡೆಯುತ್ತಿದೆ. ಮೊದಲ ದಿನ ಹಾಲಹಬ್ಬ ಆಚರಿಸಿದ ಭಕ್ತರು ೨ನೇ ದಿನವಾದ ಶುಕ್ರವಾರದಂದು ಸಂಪ್ರದಾಯದ ಕೆಂಡಸೇವೆ (Kendaseve) ಹರಕೆಯಲ್ಲಿ ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಉತ್ತರ ಕನ್ನಡ (Uttara Kannada) ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆಗಳಲ್ಲಿ ಒಂದಾದ ಸೋಡಿಗದ್ದೆ ಅಮ್ಮನವರ ಜಾತ್ರೆಯಲ್ಲಿ ದೇವರನ್ನು ನಂಬಿದ ಭಕ್ತರು ಕಷ್ಟಕಾಲದಲ್ಲಿ ಹೇಳಿಕೊಂಡಿದ್ದ ಸಂಪ್ರದಾಯದ ಕೆಂಡಸೇವೆಯ (Kendaseve) ಹರಕೆಯನ್ನು ತೀರಿಸಿದರು. ಸಹಸ್ರಾರು ಭಕ್ತರು ದೇವಿಯ ಎದುರಿನ ಆವರಣದಲ್ಲಿ ಹರಕೆಯ ಕೆಂಡ ಸೇವೆ ಸಲ್ಲಿಸಿದರು.

ವಿಡಿಯೋ ಸಹಿತ ಇದನ್ನೂ ಓದಿ: Bhatkal/ ಹಸುವಿನ ಕೆಚ್ಚಲು ಕೊಯ್ದವರಿಗೆ ಕಠಿಣ ಶಿಕ್ಷೆಯಾಗಲಿ

ದೇವಸ್ಥಾನದ ಮುಂಭಾಗದ ಪ್ರಾಂಗಣದಲ್ಲಿ ಸಿದ್ಧಪಡಿಸಿದ ಆಳೆತ್ತರದ ಕಟ್ಟಿಗೆ ರಾಶಿಯಿಂದಾಗುವ ಕೆಂಡವನ್ನು ಹಾಯುವುದು ರೋಮಾಂಚನವೇ ಸರಿ. ಭಕ್ತರಿಂದ ಸೋಡಿಗದ್ದೆ ಶ್ರೀ ಮಹಾಸತಿ ದೇವಿಗೆ ಸಲ್ಲಿಸುವ ಹರಕೆಗಳಲ್ಲಿ ಸಂಪ್ರದಾಯದ ಕೆಂಡಸೇವೆ ಪ್ರಮುಖವಾದದ್ದು. ತಮ್ಮ ಕಷ್ಟ ಪರಿಹಾರವಾದಲ್ಲಿ ದೇವಿಗೆ ಕೆಂಡಸೇವೆ ಸಲ್ಲಿಸುವುದಾಗಿ ಹೇಳಿಕೊಂಡಿದ್ದ ಭಕ್ತರು ಬೆಳಿಗ್ಗೆಯಿಂದಲೇ ಕೆಂಡದ ಮೇಲೆ ನಡೆಯುವ ಮೂಲಕ ಹರಕೆಯನ್ನು ಶ್ರದ್ದಾಭಕ್ತಿಯಿಂದ ಸಲ್ಲಿಸಿದರು.

ವಿಡಿಯೋ ಸಹಿತ ಇದನ್ನು ಓದಿ : Sodigadde/ ಗೊಂಬೆ ಅರ್ಪಿಸಿ ಹರಕೆ ತೀರಿಸಿದ ಭಕ್ತರು

ವಿಶೇಷ ಕೆಂಡ ಸೇವೆ ಹರಕೆ: ಈ ಕೆಂಡಸೇವೆಯ ವಿಶೇಷವೆಂದರೆ ಭಕ್ತರ ಎಲ್ಲಾ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವದಾಗಿದೆ. ಹರಕೆ ಹೊತ್ತ ಭಕ್ತರು ಅವರ ಸಮಸ್ಯೆ ಪರಿಹಾರವಾದ ನಂತರ ಈ ಜಾತ್ರೆಯ ಕೆಂಡ ಸೇವೆಯನ್ನು ಮಾಡುತ್ತಾರೆ. ಮುಂದಿನ ದಿನದಲ್ಲಿ ಕುಟುಂಬಕ್ಕಾಗಲಿ, ವೈಯಕ್ತಿಕವಾಗಲಿ ಯಾವುದೇ ಕಷ್ಟಬಾರದಿರಲಿ ಎಂದು ಬೇಡಿಕೊಳ್ಳುತ್ತಾರೆ. ಪ್ರೇತಬಾಧೆ, ಸಂತಾನ ಭಾಗ್ಯ, ಉದ್ಯೋಗ, ಕುಟುಂಬಗಳಲ್ಲಿನ ಸಮಸ್ಯೆ, ಕಳ್ಳತನ, ರೋಗ ರುಜನಿಗಳ ಪರಿಹಾರಕ್ಕೆ ಹರಕೆ ಹೊತ್ತು ಪರಿಹಾರ ಸಿಕ್ಕ ನಂತರ ಹರಕೆ ಸಲ್ಲಿಸಿದ ಸಾಕಷ್ಟು ಉದಾಹರಣೆಗಳಿವೆ.

ಇದನ್ನು ಓದಿ : Golden Girls/ ಚಿನ್ನದ ಹುಡುಗಿಯರು ಇವರು

ದಿನದಿಂದ ದಿನಕ್ಕೆ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಶಕ್ತಿ ರಾಜ್ಯದ ಮೂಲೆ ಮೂಲೆಯ ಭಕ್ತರನ್ನು ಆಕರ್ಷಿಸುತ್ತಿದೆ. ಜಾತ್ರೆಯ ವೇಳೆ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣಸಿಗುತ್ತಿದೆ. ಇನ್ನು ಭಟ್ಕಳದಲ್ಲಿ ಸೇವೆ ಸಲ್ಲಿಸಿದ ಇಲಾಖೆಯ ಕೆಲ ಅಧಿಕಾರಿಗಳು ಸಹ ಅವರ ಮನಸ್ಸಿನ ಇಷ್ಟಾರ್ಥಕ್ಕೆ ಕೆಂಡ ಸೇವೆ ಮಾಡಿರುವುದುಂಟು.

ಇದನ್ನು ಓದಿ : serial accident/ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸಾವು

ಈ ವರ್ಷ ಮಹಿಳೆಯರು, ಮಕ್ಕಳ ಸಂಖ್ಯೆಯೇ ಹೆಚ್ಚಿದ್ದು, ದೇವಿಯ ಹರಕೆಯನ್ನು ಕೆಂಡಸೇವೆಯ ಮೂಲಕ ಸಲ್ಲಿಸಿದರು. ಜಾತ್ರೆ ಪ್ರಾರಂಭವಾಗಿ ಎರಡು ದಿನಗಳಾಗಿದ್ದು, ಈಗಲೇ ದೇವಿಯ ದರ್ಶನಕ್ಕೆ ಕಿಕ್ಕಿರುದು ಸೇರುತ್ತಿರುವ ಭಕ್ತರ ಸಂಖ್ಯೆ ದೇವಿಯ ಮಹಾತ್ಮೆಯನ್ನು ತಿಳಿಸುತ್ತದೆ.

ಇದನ್ನು ಓದಿ : Police raid/ ಜಾನುವಾರು ಮಾಂಸ ಕಡಿಯುತ್ತಿದ್ದ ಮೂವರ ಬಂಧನ

ಸೋಡಿಗದ್ದೆ ಜಾತ್ರೆಗೆ ದೂರದ ಊರುಗಳಿಂದ ಬರುವ ಭಕ್ತರ ಜತೆಗೆ ಸ್ಥಳೀಯವಾಗಿ ಜಾತ್ರೆಗೆ ಭಕ್ತರು ಆಗಮಿಸುತ್ತಿರುವುದು ಕಂಡುಬಂತು. ಸಂಜೆಯಾದೊಡನೆ ಸೋಡಿಗದ್ದೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದರು. ಜಾತ್ರೆಯ ಕೆಂಡ ಸೇವೆಗೆ, ಬರುವಂತಹ ಎಲ್ಲಾ ಭಕ್ತರಿಗೆ ದೇವಸ್ಥಾನದಲ್ಲಿ ಸಾಕಷ್ಟು ಸ್ವಯಂ ಸೇವಕರು ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿದ್ದು, ಭಕ್ತರಿಗಾಗಿ ಮಜ್ಜಿಗೆ, ಪಾನಕವನ್ನು ವಿತರಿಸಿದ್ದಾರೆ.

ಇದನ್ನು ಓದಿ : GSB/ ಜಿ.ಎಸ್.ಬಿ. ಕಲ್ಯಾಣ ಸೇವಾ ಸಮಿತಿ ವಾರ್ಷಿಕೋತ್ಸವ

ಒಟ್ಟಾರೆ ಬಿಸಿ ಬಿಸಿ ಬೆಂಕಿಯ ಕೆಂಡಗಳನ್ನು ಹಾದು ದೇವಿಗೆ ಸೇವೆ ಸಲ್ಲಿಸುವುದರ ಮೂಲಕ ಹರಕೆಯನ್ನು ಭಕ್ತರು ತೀರಿಸಿದರು. ಕೆಂಡ ಸೇವೆಯಲ್ಲಿ ಭಾಗಿಯಾಗುವ ಎಲ್ಲರನ್ನು ದೇವಿ ರಕ್ಷಿಸುತ್ತಾಳೆಂಬ ನಂಬಿಕೆ ಸದಾ ಇಲ್ಲಿನ ಭಕ್ತ ವೃಂದದಲ್ಲಿ ದೃಢವಾಗಿದೆ.

ಈ ಸುದ್ದಿಯ ವಿಡಿಯೋವನ್ನು  ಯೂಟ್ಯೂಬ್ಇನ್ಸ್ಟಾಗ್ರಾಂ ಮತ್ತು  ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನು ಓದಿ : .cow protection/ ಭಟ್ಕಳದಲ್ಲಿನ ಗೋ ಹತ್ಯಾ ಪ್ರಕರಣ ಬಿಚ್ಚಿಟ್ಟ ಹಿಂಜಾವೇ