ಕಾರವಾರ (Karwar) : ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಂಗನ ಕಾಯಿಲೆ (KFD) ಹರಡದಂತೆ ಈಗಿನಿಂದಲೇ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರು ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಮಂಗನ ಕಾಯಿಲೆ (KFD) ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಯಿಲೆ ಕಾಣಿಸಿಕೊಳ್ಳಬಹುದಾದ ತಾಲೂಕು ಮತ್ತು ಗ್ರಾಮಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ಎಲ್ಲಾ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಡೆಪೋ ತೈಲವನ್ನು ವಿತರಿಸುವಂತೆ ಮತು ಅದನ್ನು ಬಳಸುವ ವಿಧಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ವಿಡಿಯೋ ಸಹಿತ ಇದನ್ನು ಓದಿ : cattle protect/ ಕಸಾಯಿಖಾನೆಗೆ ಹೋಗುತ್ತಿದ್ದ ಜಾನುವಾರುಗಳ ರಕ್ಷಣೆ
ಜನವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ ೧೭೧೧ ಮಾನವ ಸ್ಯಾಂಪಲ್ ಗಳನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಒಂದು ಪ್ರಕರಣದಲ್ಲಿ ಮಾತ್ರ ಪಾಸಿಟಿವ್ ಬಂದಿದೆ. ಪ್ರಸ್ತುತ ಅವರು ಕೂಡ ಗುಣಮುಖರಾಗಿದ್ದಾರೆ. ವಿವಿಧ ಕಾರಣಗಳಿಂದ ೧೮ ಮಂಗಗಳು (monkey) ಸಾವನ್ನಪ್ಪಿವೆ. ಸಾರ್ವಜನಿಕರು ಗ್ರಾಮ ಪಂಚಾಯತ್ ಮತ್ತು ಅರಣ್ಯ ವ್ಯಾಪ್ತಿಯಲ್ಲಿ ಮಂಗಗಳು ಸಾವನ್ನಪ್ಪಿದರೆ ಕೂಡಲೇ ಆರೋಗ್ಯ ಇಲಾಖೆಗೆ (health department) ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ವಿಡಿಯೋ ಸಹಿತ ಇದನ್ನು ಓದಿ : Cricket fans/ ಭಟ್ಕಳದಲ್ಲಿ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ
ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ದಾಸ್ತಾನು ಇಡುವಂತೆ ಮತ್ತು ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನು ಓದಿ : cattle protection/ ಜಾನುವಾರು ರಕ್ಷಣೆ; ೮ ಜನರ ವಿರುದ್ಧ ಪ್ರಕರಣ
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ನೀರಜ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಅರ್ಚನಾ, ಜಿಲ್ಲಾ ಮಲೇರಿಯಾ (malaria) ನಿಯಂತ್ರಣಾಧಿಕಾರಿ ಕ್ಯಾ. ಡಾ.ರಮೇಶ ರಾವ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ, ಕ್ರಿಮ್ಸ್ ನ (KRIMS) ವೈದ್ಯರು ಮತ್ತು ವಿಡಿಯೋ ಕಾನ್ಫರೆನ್ಸ್ (video conference) ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರರು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಇದನ್ನು ಓದಿ : bike collision/ ಬೈಕುಗಳ ಡಿಕ್ಕಿಗೆ ನಾಲ್ವರಿಗೆ ಗಾಯ