ಕಾರವಾರ (Karwar) : ಉತ್ತರ ಕನ್ನಡ (Uttarakannada) ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಮುರ್ಡೇಶ್ವರ (Murdeshwar ) ಪೊಲೀಸ್ ಠಾಣಾ ವ್ಯಾಪ್ತಿಯ ಮಾತ್ಹೋಬಾರ ಮುರ್ಡೇಶ್ವರ ದೇವಸ್ಥಾನದ ಮಹಾರಥೋತ್ಸವ ಹಿನ್ನೆಲೆ ಜ.೧೯ ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ (liquor ban).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನಿಷೇಧ ಆದೇಶ ಹೊರಡಿಸಲಾಗಿದೆ. ಜ.೧೯ರ ಬೆಳಗ್ಗೆ ೬ ಗಂಟೆಯಿಂದ ಜ. ೨೦ ರ ಬೆಳಗ್ಗೆ ೬ ಗಂಟೆಯವರೆಗೆ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಬಂದ್ ಮಾಡುವಂತೆ ಮತ್ತು ಮದ್ಯ ಸಾಗಾಟ ಹಾಗೂ ಮಾರಾಟ ನಿಷೇಧಿಸಿ (liquor ban) ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಜ.೧೮ರಂದು ದಂಡಿನ ದುರ್ಗಾದೇವಿ ವರ್ಧಂತಿ ಮಹೋತ್ಸವ