ಭಟ್ಕಳ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಮತ್ತು ನ್ಯಾಯಾಲಯದ ಸಿಬ್ಬಂದಿ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಹುತಾತ್ಮರ ದಿನ (Martyrs’ Day ) ಆಚರಿಸಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮರ ದಿನಾಚರಣೆ (Martyrs’ Day) ಕುರಿತು ಹಿರಿಯ ಶ್ರೇಣಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. (JMFC) ನ್ಯಾಯಾಧೀಶ ಕಾಂತ ಕುರಣಿ ಮಾತನಾಡಿದರು. ವಕೀಲರು, ನ್ಯಾಯಾಲಯದ ಸಿಬ್ಬಂದಿ ಮೌನಾಚರಣೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ಧನವತಿ, ಸಹಾಯಕ ಸರಕಾರಿ ಅಭಿಯೋಜಕರಾದ ವಿವೇಕ ನಾಯ್ಕ, ಶೇಖರ ಹರಿಕಾಂತ, ವಕೀಲರಾದ ವಿ.ಎಫ್.ಗೋಮ್ಸ, ಎಸ್.ಜೆ. ನಾಯ್ಕ, ನಾರಾಯಣ ಯಾಜಿ, ಮಹೇಶ ಆರ್. ನಾಯ್ಕ, ಆರ್.ಜಿ.ನಾಯ್ಕ, ವಿ.ಆರ್. ಸರಾಫ, ಗಣೇಶ ದೇವಾಡಿಗ, ರವೀಂದ್ರ, ನಾರಾಯಣ ನಾಯ್ಕ, ಗಣೇಶ ಮುರ್ಡೇಶ್ವರ, ನ್ಯಾಯಾಲಯಗ ಸಿಬ್ಬಂದಿ ಮುಂತಾದವರಿದ್ದರು.
ಇದನ್ನೂ ಓದಿ : Cleanliness Day/ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ದಿನಾಚರಣೆ