ಭಟ್ಕಳ: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ (MDS exam) ಭಟ್ಕಳದ ಯುವಕ ಡಾ ಬಿ ಕೆ ರಕ್ಷಿತ್ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್ ಪಡೆಯುವುದರ ಮೂಲಕ ಸಾಧನೆ ಮಾಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ ತಾಲೂಕಿನ ಬೆಳೆಕೆಯ, ಗೊರಟೆ ಕ್ರಾಸ್ ನಿವಾಸಿ ಹಾಗೂ ಪ್ರಸ್ತುತ ಜಾಲಿಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ ಕುಮಾರ ಹಾಗೂ ಎಂ ಕೆ ಗೀತಾ ದಂಪತಿ ಮಗನಾದ ಇವರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯದ (Sullya) ಕೆ ವಿ ಜಿ ಡೆಂಟಲ್ ಕಾಲೇಜಿನಲ್ಲಿ ತಮ್ಮ ಬಿಡಿಎಸ್ (BDS) ಪೂರೈಸಿ ಸ್ನಾತಕೋತ್ತರ ಪದವಿ ಪರೀಕ್ಷೆ (MDS exam)ಯಲ್ಲಿ ಪ್ರಥಮ ರ್ಯಾಂಕ ಪಡೆದು ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯದ ಚಿನ್ನದ ಪದಕ್ಕೆ ಅರ್ಹರಾಗಿದ್ದಾರೆ.
Annual General Meeting/ ನಿವೃತ್ತ ಸರಕಾರಿ ನೌಕರರ ಸಂಘದ “ವಾರ್ಷಿಕ ಮಹಾಸಭೆ”
ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ ವಿಭಾಗದ ಮುಖ್ಯಸ್ಥ ಡಾ ನುಸ್ರತ್ ಫರೀದ್ ಮಾರ್ಗದರ್ಶನದಲ್ಲಿ ಇವರು ಅಧ್ಯಯನ ಮಾಡಿದ್ದಾರೆ. ಇವರು ಭಟ್ಕಳದ ಆನಂದಾಶ್ರಮ ಕಾನ್ವೆಂಟಿನಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪಿ ಯು ಶಿಕ್ಷಣ ಪೂರೈಸಿದ್ದಾರೆ.
Ramadan stalls/ ೩೬ ರಂಜಾನ್ ಮಳಿಗೆಗೆ ೧೩೫೯ ಅರ್ಜಿ: ಲಾಟರಿ ಮೂಲಕ ಹಂಚಿಕೆ


