ಕಾರವಾರ (Karwar): ಇಲ್ಲಿನ ಕದಂಬ ನೌಕಾನೆಲೆಯ (Kadamba naval base) ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ ಆರೋಪದಡಿ ರಾಷ್ಟ್ರೀಯ ತನಿಖಾ ದಳ (NIA) ಮಂಗಳವಾರ ಇಬ್ಬರು ಯುವಕರನ್ನು ಮತ್ತೊಮ್ಮೆ ವಶಕ್ಕೆ ಪಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ (Ankola) ಅಕ್ಷಯ ನಾಯ್ಕ ಆರೋಪಿತರು. ಎರಡು ಪ್ರತ್ಯೇಕ ತಂಡ ರಚಿಸಿಕೊಂಡು ನಸುಕಿನ ಜಾವ ಎನ್‌ಐಎ (NIA) ಅಧಿಕಾರಿಗಳು ಮುದಗಾ ಮತ್ತು ಅಂಕೋಲಾದಲ್ಲಿ ಏಕಕಾಲಕ್ಕೆ ಯುವಕರನ್ನು ವಶಕ್ಕೆ ಪಡೆದಿದೆ. ಕಳೆದ ಆರು ತಿಂಗಳ ಹಿಂದೆಯೂ ಈ ಇಬ್ಬರು ಆರೋಪಿತರು ಸೇರಿದಂತೆ ಮೂವರನ್ನು NIA ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಇದನ್ನು ಓದಿ : Vardhanthi / ನಾಗಬನ ದೇವರ ದ್ವಿತೀಯ ವರ್ಧಂತಿ ಸಂಪನ್ನ

೨೦೨೩ರಲ್ಲಿ ನೌಕಾನೆಲೆಯ ಚಿತ್ರಗಳು ಪಾಕಿಸ್ತಾನದ (Pakistan) ವಿದೇಶಿ ಬೇಹುಗಾರರಿಗೆ ರವಾನೆಯಾಗಿದ್ದ ಹಿನ್ನೆಲೆಯಲ್ಲಿ ಎನ್‌ಐಎ ಹೈದರಾಬಾದ್ (Hyderabad) ಘಟಕವು ನೌಕಾನೆಲೆಯ ಕೆಲ ಅಧಿಕಾರಿ, ಸಿಬ್ಬಂದಿಯನ್ನು ವಶಕ್ಕೆ ಪಡೆದಿತ್ತು. ಅದೇ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ತನಿಖಾ ದಳ ಈ ಇಬ್ಬರು ಯುವಕರನ್ನು ಮತ್ತೊಮ್ಮೆ ವಶಕ್ಕೆ ಪಡೆದಿದೆ.

ಇದನ್ನು ಓದಿ : Rescue of tourists/ ಅರಣ್ಯದಲ್ಲಿ ಸಿಲುಕಿದ ಪ್ರವಾಸಿಗರ ರಕ್ಷಣೆ

೨೦೨೪ರ ಆ.೨೮ ರಂದು ಈ ಇಬ್ಬರು ಆರೋಪಿಗಳು ಸೇರಿ ಮೂವರನ್ನು ಎನ್‌ಐಎ ವಿಚಾರಣೆ ನಡೆಸಿ, ನೋಟಿಸ್‌ ನೀಡಿತ್ತು. ಸೋಮವಾರ ಪುನಃ ಆರು ಜನ ಅಧಿಕಾರಿಗಳನ್ನು ಒಳಗೊಂಡ ತಂಡವು ಕಾರವಾರ ನಗರ ಪೊಲೀಸ್‌ ಠಾಣೆಯಲ್ಲಿ ಹಲವು ತಾಸುಗಳವರೆಗೆ ಮಾಹಿತಿ ಕಲೆ ಹಾಕಿತ್ತು ಎಂದು ತಿಳಿದು ಬಂದಿದೆ.

ಇದನ್ನು ಓದಿ : Mariyamma/ ಗಂಜಿ ಮಾರಿಯಮ್ಮ ದೇವಿ ಪ್ರತಿಷ್ಠಾಪನೆ

ಇಬ್ಬರನ್ನೂ ಸಾಮಾಜಿಕ ಜಾಲತಾಣದಲ್ಲಿ (social media) ಯುವತಿಯರ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದ ಬೇಹುಗಾರರು ನೌಕಾನೆಲೆಯ ಚಿತ್ರಗಳನ್ನು ಸಂಗ್ರಹಿಸಿದ್ದರು. ಅದಕ್ಕಾಗಿ ಅವರಿಗೆ ಹಣವನ್ನೂ ಪಾವತಿಸಿದ್ದರು ಎಂಬ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.

ಇದನ್ನು ಓದಿ : Music/ ಸಿದ್ದಿವಿನಾಯಕ ದೇವಾಲಯದಲ್ಲಿ ಭಕ್ತಿ ಸಂಗೀತ

ಪ್ರಸ್ತುತ ವೇತತ್‌ನನ್ನು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ, ಅಕ್ಷಯನನ್ನು ಅಂಕೋಲಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನು ಓದಿ : Kumta / ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ನಿಧನ