ಭಟ್ಕಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಅಂಗ ಸಂಸ್ಥೆಯಾದ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ (Bhatkal Journalists) ಸಂಘದ ನೂತನ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ಮೋಹನ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶೈಲೇಶ ವೈದ್ಯ ಪುನರಾಯ್ಕೆಯಾಗಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸೋಮವಾರ ಸಂಜೆ ತಾಲೂಕು ಕಾರ್ಯನಿರತ ಪತ್ರಕರ್ತರ (Bhatkal Journalists) ಸಂಘದ ಮುಂದಿನ ಮೂರು ವರ್ಷಗಳ ಪದಾಧಿಕಾರಿಗಳ ಚುನಾವಣೆಯು ಹಿರಿಯ ಪತ್ರಕರ್ತ ಹಾಗೂ ಮಾಜಿ ಅಧ್ಯಕ್ಷ ಸತೀಶ ಕುಮಾರ್ ನೇತೃತ್ವದಲ್ಲಿ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಒಂದೊಂದೇ ಹೆಸರು ಸೂಚನೆಯಾಗಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇದನ್ನು ಓದಿ: Vidyotsava/ ವಿಜೃಂಭಣೆಯಿಂದ ನಡೆದ ವಿದ್ಯೋತ್ಸವ ೨೦೨೫

ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅತೀಕುರ್ ರಹಮಾನ್ ಶಾಬಂದ್ರಿ, ಖಜಾಂಚಿ ಸ್ಥಾನಕ್ಕೆ ಫಯಾಜ್ ಮುಲ್ಲಾ ಆಯ್ಕೆಯಾದರು. ಸಂಘದ ಗೌರವಾಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಅಧ್ಯಕ್ಷ ಎಂ ಆರ್ ಮಾನ್ವಿ ಅವರನ್ನು ಆಯ್ಕೆ ಮಾಡಲಾಯಿತು.

ಇದನ್ನು ಓದಿ: Cleaning/ ಹಿಂದೂ ರುದ್ರಭೂಮಿ ಸ್ವಚ್ಛಗೊಳಿಸಿದ ಕ್ರಿಯೇಟಿವ್ ಬಾಯ್ಸ್

ಈ ಸಂದರ್ಭ ದಲ್ಲಿ ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಮಾಜಿ ಅಧ್ಯಕ್ಷರಾದ ರಾಘವೇಂದ್ರ ಹೆಬ್ಬಾರ್ ಹಾಗೂ ಭಾಸ್ಕರ ನಾಯ್ಕ, ಸದಸ್ಯರಾದ ಮನಮೋಹನ ನಾಯ್ಕ, ಇನಾಯತುಲ್ಲಾ ಗವಾಯಿ, ವಿಷ್ಣು ದೇವಡಿಗ, ರಿಜ್ವಾನ್ ಗಂಗಾವಳಿ, ಅಝರ್ ಬರ್ಮಾವರ್, ಪ್ರಸನ್ನ ಭಟ್ಟ, ಲೋಕೇಶ ನಾಯ್ಕ, ಈಶ್ವರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ಇದನ್ನು ಓದಿ: Lecture/ ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ