ಭಟ್ಕಳ (Bhatkal) : ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ (SKDRP) ಮುಂಗಾರಿನ ಮೊದಲ ಯಂತ್ರ ಶ್ರೀ ಭತ್ತ ನಾಟಿ (planting) ಕಾರ್ಯಕ್ಕೆ ತಾಲೂಕಿನ ಸಾರದಹೊಳೆ ರವೀಂದ್ರ ನಾಯ್ಕ ಗದ್ದೆಯಲ್ಲಿ ಚಾಲನೆ ನೀಡಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕ ಮಹೇಶ ಎಂ.ಡಿ. ಹಾಗೂ ಭಟ್ಕಳ ತಾಲೂಕು ಯೋಜನಾಧಿಕಾರಿ ಲತಾ ಬಂಗೇರ ನಾಟಿ (planting) ಯಂತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿ ಹೆಚ್ ಎಸ್ ಸಿ ವ್ಯವಸ್ಥಾಪಕ ಸುಮಂತ ಹಾಗೂ ಕೃಷಿ ಅಧಿಕಾರಿ ಮಹೇಶ ಹೆಗಡೆ , ಚಾಲಕ ಕುಮಾರ, ಕೃಷಿಕ ಭೈರ ನಾಯ್ಕ, ಕುಪ್ಪ ನಾಯ್ಕ, ಪರಮಯ್ಯ ನಾಯ್ಕ, ಇತರರು ಉಪಸ್ಥಿತರಿದ್ದರು.

ಇದನ್ನೂಓದಿ: Duplicate Notes/ ಮುರ್ಡೇಶ್ವರದಲ್ಲಿ ಹುಬ್ಬಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ !

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಭಟ್ಕಳ ತಾಲೂಕಿನಲ್ಲಿ ೭೫೦ಕ್ಕೂ ಹೆಚ್ಚು ಎಕರೆ ವಿಸ್ತೀರ್ಣದ ಭೂಪ್ರದೇಶದಲ್ಲಿ ಯಂತ್ರ ಶ್ರೀ ಭತ್ತ ಬೇಸಾಯದ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಯೋಜನೆ ಅಡಿಯಲ್ಲಿ ಕೂಲಿ ಆಳುಗಳ ಸಮಸ್ಯೆಗೆ ಪರಿಹಾರ ಪಡೆಯುವುದಲ್ಲದೆ, ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯಬಹುದಾಗಿದೆ. ಕಳೆದ ಹತ್ತು ವರ್ಷಗಳಿಂದ ರೈತರಿಗೆ ಮಾಹಿತಿ ನೀಡುತ್ತಾ ಬಂದಿದ್ದು ಸಸಿ ಮಡಿ ತಯಾರಿಸಿ ಯಾಂತ್ರಿಕೃತ ಭತ್ತ ಬೇಸಾಯ ಮುಂದುವರಿಸಲಾಗಿದೆ. ಒಂದು ಎಕರೆಗೆ ಎರಡು ಗಂಟೆ ಸಮಯದಲ್ಲಿ ನಾಟಿ ಮಾಡಬಹುದಾಗಿದೆ. ಇದರಿಂದ ರೈತರಿಗೆ ಸೂಕ್ತ ಸಮಯದಲ್ಲಿ ಕೆಲಸಗಳು ಸಾಗುತ್ತಿದ್ದು ರೈತರು ಉತ್ಸುಕತೆಯಿಂದ ಕೃಷಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ಓದಿ : School holiday/ ಕರಾವಳಿಯಲ್ಲಿ ಶಾಲೆಗಳಿಗೆ ರಜೆ