ಕಾರವಾರ (Karwar) : ಭಾರತೀಯ ಹವಾಮಾನ ಇಲಾಖೆ (IMD)/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ (Coastal) ಭಾಗದಲ್ಲಿ ಮೂರು ದಿನಗಳಿಗೆ (ಮೇ ೧೨ರಿಂದ ೧೪ರವರೆಗೆ) ರೆಡ್ ಅಲರ್ಟ್ (Red Alert) ಇದೆ. ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ (forecast). ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಸಂದರ್ಭದಲ್ಲಿ (Red Alert) ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ.  ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ ೨೪*೭ ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿದೆ.

ಇದನ್ನೂ ಓದಿ : Two arrested/ ಫೇಸ್‌ ಬುಕ್‌ನಲ್ಲಿ ಸಚಿವರ ಅವಹೇಳನ; ಇಬ್ಬರು ಪೊಲೀಸ್‌ ವಶಕ್ಕೆ

ಸಾರ್ವಜನಿಕರು ಯಾವುದೇ ಅನಧಿಕೃತ/ವದಂತಿಗಳಿಗೆ ಕಿವಿಗೊಡಬಾರದು. ಮೂರು ದಿನಗಳ ಕಾಲ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ
ಪಾಲಕರು ಜಾಗೃತೆ ವಹಿಸಬೇಕು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ : birth anniversary celebration/ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ

ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು. ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : Table Tennis/ ಸುಧೀಂದ್ರ ಕಾಲೇಜಿನಲ್ಲಿ ಟೇಬಲ್‌ ಟೆನ್ನಿಸ್‌ ಪಂದ್ಯಾವಳಿ

ಸಾರ್ವಜನಿಕರಿಗೆ ಆಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು ಎಂದು ಸಲಹೆ ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ : Murdeshwar/ ಗಾಯಾಳು ವಿರುದ್ಧವೇ ದೂರು ದಾಖಲು !

ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು. ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯ ಗೋಡೆ ಕಂಡುಬಂದಲ್ಲಿ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ : ೨೪*೭ ಕಂಟ್ರೋಲ್ ರೂಂ-೦೮೩೮೨-೨೨೯೮೫೭, ವಾಟ್ಸಪ್ ಸಂಖ್ಯೆ: ೯೪೮೩೫೧೧೦೧೫ ಗೆ ಮಾಹಿತಿ ನೀಡಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕು ತಹಶೀಲ್ದಾರರ ಕಚೇರಿಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : missing/ ಅಳ್ವೆಕೋಡಿ ಬಂದರಿನಲ್ಲಿ ಕಾರು ಪತ್ತೆ; ವ್ಯಕ್ತಿ ನಾಪತ್ತೆ