ಭಟ್ಕಳ (Bhatkal) : ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಸೋಡಿಗದ್ದೆ (Sodigadde) ಶ್ರೀ ಮಹಾಸತಿ ದೇವರ ಜಾತ್ರೆಯು ಗುರುವಾರದಂದು ಹಾಲಹಬ್ಬದಿಂದ ಅದ್ದೂರಿಯಾಗಿ ಆರಂಭಗೊಂಡಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸತತ ಒಂಭತ್ತು ದಿನಗಳ ಕಾಲ ಅದ್ದೂರಿಯಾಗಿ ಸಂಭ್ರಮದಿಂದ ನಡೆಯುವ ಅತ್ಯಂತ ಮಹತ್ವದ ಜಾತ್ರೆಯಾಗಿದೆ. ದೇವಸ್ಥಾನದ ಆಡಳಿತಾಧಿಕಾರಿಯಾದ ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ ಮಧ್ಯಾಹ್ನ ವೇಳೆ ವಿಶೇಷ ಪೂಜೆ ಸಲ್ಲಿಸಿ, ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಇದನ್ನು ಓದಿ : Golden Girls/ ಚಿನ್ನದ ಹುಡುಗಿಯರು ಇವರು

ಭಕ್ತರು ಶ್ರೀ ದೇವರಿಗೆ ಹೂವಿನ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡರು. ಮುಂಜಾನೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತು ತಮ್ಮ ಹರಕೆಯನ್ನು ತೀರಿಸಿದರು. ಜಿಲ್ಲೆಯಲ್ಲಿ ಅತ್ಯಂತ ದೊಡ್ಡ ಜಾತ್ರೆಯಾದ ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ಜಾತ್ರೆಗೆ ಊರ ಹಾಗೂ ಪರ ಊರಿನಿಂದ ಸಹಸ್ರಾರು ಭಕ್ತಾದಿಗಳು ಆಗಮಿಸಿ ತಮ್ಮ ಹರಕೆಗಳನ್ನು ತೀರಿಸುವ ಸಂಪ್ರದಾಯ ರೂಢಿಯಲ್ಲಿದೆ.

ಇದನ್ನು ಓದಿ : serial accident/ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸಾವು

ದೇವಸ್ಥಾನವನ್ನು ವಿಶೇಷ ರೀತಿಯ ಬಗೆ ಬಗೆಯ ಹೂವಿನಿಂದ ದೇವಾಲಯ ಪ್ರಾಂಗಣವನ್ನು ಸುಂದರವಾಗಿ ಕಂಗೊಳಿಸುವಂತೆ ಅಲಂಕೃತಗೊಳಿಸಲಾಗಿದೆ. ಮೊದಲ ದಿನದ ಜಾತ್ರಾ ಮಹೋತ್ಸವಕ್ಕೆ ದೇವರ ದರ್ಶನಕ್ಕೆ ಭಕ್ತಾದಿಗಳ ನೂಕೂನುಗ್ಗಲು ಅಷ್ಟಾಗಿ ಕಂಡು ಬರಲಿಲ್ಲ. ಎರಡನೇ ದಿನದ ವಿಶೇಷ ಕೆಂಡ ಸೇವೆ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಬರಲಿದ್ದು, ತಮ್ಮ ಹರಕೆಯನ್ನು ತೀರಿಸಿ ದೇವಿಗೆ ಪೂಜೆಯನ್ನು ಸಲ್ಲಿಸಲಿದ್ದಾರೆ.

ಇದನ್ನು ಓದಿ : Police raid/ ಜಾನುವಾರು ಮಾಂಸ ಕಡಿಯುತ್ತಿದ್ದ ಮೂವರ ಬಂಧನ 

ಸೋಡಿಗದ್ದೆ ಶ್ರೀ ಮಹಾಸತಿ ಜಾತ್ರೆಯಲ್ಲಿ ದೇವರಿಗೆ ಗೊಂಬೆಗಳನ್ನು ಅರ್ಪಿಸುವುದು ಪ್ರಮುಖ ಹರಕೆಗಳಲ್ಲಿ ಒಂದಾಗಿದೆ. ಗೊಂಬೆಗಳಲ್ಲಿಯೂ ಕೂಡಾ ಮೂರು ವಿವಿಧ ಗಾತ್ರದ ಗೊಂಬೆಗಳನ್ನು ಅರ್ಪಿಸಲಿದ್ದು, ಭಕ್ತರು ತಮ್ಮ ತಮ್ಮ ಶಕ್ತ್ಯಾನುಸಾರ ಹರಕೆಯ ಗೊಂಬೆಗಳನ್ನು ನೀಡುತ್ತಾರೆ. ಗೊಂಬೆಗಳಲ್ಲಿ ಮಹಾಸತಿ, ಜಟ್ಟಿಗರಾಯ, ಮರದ ಹುಲಿರಾಯ, ನಾಗರಕಲ್ಲು, ಹಾಯ್ ಗೂಳಿ ಗೊಂಬೆಗಳನ್ನು ಹರಕೆಯ ರೂಪದಲ್ಲಿ ಸಲ್ಲಿಸಲಾಯಿತು. ಭಕ್ತರು ಹೂವಿನ ಪೂಜೆ, ತೊಟ್ಟಿಲು ಸಮರ್ಪಣೆ, ಕಣ್ಣು, ಇತ್ಯಾದಿಗಳನ್ನು ಸಮರ್ಪಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.

ಇದನ್ನು ಓದಿ : GSB/ ಜಿ.ಎಸ್.ಬಿ. ಕಲ್ಯಾಣ ಸೇವಾ ಸಮಿತಿ ವಾರ್ಷಿಕೋತ್ಸವ

ಈ ಬಾರಿ ಜಾತ್ರೆಯ ಸಂದರ್ಭದಲ್ಲಿ ಎಂಟು ದಿನಗಳ ಕಾಲ ಪ್ರಸಾದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಗುರುವಾರದಿಂದಲೇ ಪ್ರಸಾದ ಭೋಜನ ಆರಂಭಗೊಂಡು ಸಾವಿರಾರು ಭಕ್ತರ ಪ್ರಸಾದ ರೂಪದಲ್ಲಿ ಭೋಜನವನ್ನು ಮಾಡಿದರು. ದೇವಾಲಯದ ಸುತ್ತಲೂ ಜಾತ್ರಾ ಮಹೋತ್ಸವದ ಅಂಗಡಿ-ಮುಂಗಟ್ಟುಗಳು ಜಾತ್ರೆಯ ವೈಭವವನ್ನು ಇನ್ನಷ್ಟು ಹೆಚ್ಚಿಸಿದವು.

ಈ ಸುದ್ದಿಯ ವಿಡಿಯೋವನ್ನು  ಯೂಟ್ಯೂಬ್ಇನ್ಸ್ಟಾಗ್ರಾಂ ಮತ್ತು  ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನು ಓದಿ : cow protection/ ಭಟ್ಕಳದಲ್ಲಿನ ಗೋ ಹತ್ಯಾ ಪ್ರಕರಣ ಬಿಚ್ಚಿಟ್ಟ ಹಿಂಜಾವೇ