ಭಟ್ಕಳ (Bhatkal): ಹೊನ್ನಾವರ (Honnavar) ಕಡೆಯಿಂದ ಭಟ್ಕಳದ ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ (Three Arrest).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ವಧೆ ಮಾಡುವ ಉದ್ದೇಶದಿಂದ ನೀರು, ಹುಲ್ಲು ಕೊಡದೆ ಸಾಗಾಟ ಮಾಡುತ್ತಿದ್ದಾಗ ಶಿರಾಲಿ ಚೆಕ್ಪೋಸ್ಟ್ ನಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿ.ಎಸ್.ಐ ಭರಮಪ್ಪ ಬೆಳಗಲಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ (Three Arrest). ವಾಹನ ವಶಕ್ಕೆ ಪಡೆದು ಸುಮಾರು ೫.೭೦ ಲಕ್ಷ ರೂ. ಮೌಲ್ಯದ ೧೯ ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ : Red Alert/ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ ೨೭ರವರೆಗೆ ರೆಡ್ ಅಲರ್ಟ್ !
ಹಾವೇರಿ (Haveri) ಮೂಲದ ಚೇತನ ನಂದೀಶ ಕಡ್ಲಿ (೨೬), ಸಂತೋಷ ದ್ಯಾನಪ್ಪ ಬೋರದ (೨೫) ಮತ್ತು ಗದಗ (Gadag) ನಿವಾಸಿ ದುರ್ಗಪ್ಪ ಫಕ್ಕೀರಪ್ಪ ಛಲವಾದಿ (೫೦) ಬಂಧಿತ ಆರೋಪಿಗಳು. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಅಣ್ಣಪ್ಪ ನಾಯ್ಕ,ರಾಮಯ್ಯ ನಾಯ್ಕ, ಬಸವನಗೌಡ ಪಾಟೀಲ, ಚಾಲಕ ದೇವರಾಜ ಮೊಗೇರ ಪಾಲ್ಗೊಂಡಿದ್ದರು.
ಇದನ್ನೂ ಓದಿ : Kattalan/ ಪ್ಯಾನ್ ಇಂಡಿಯಾ ಮಟ್ಟದಲ್ಲಿ “ಕಾಟ್ಟಾಲನ್” ಸಿದ್ಧತೆ