ಭಟ್ಕಳ (Bhatkal): ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಶ್ರೀ ಗುರು ವಿದ್ಯಾಧಿರಾಜ (Guru Vidyadhiraja) ದಿ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಲೇಜಿನ (PU College) ನೂತನ ಕಟ್ಟಡದ ಶಿಲಾನ್ಯಾಸವು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ (Partagali Math) ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ (Vader Swamiji) ಅಮೃತ ಹಸ್ತದಿಂದ ನೆರವೇರಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ನಂತರ ಆಶೀರ್ವಚನ ನೀಡಿದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ (Vader Swamiji), “ಕಟ್ಟಡ ರೂಪುಗೊಂಡರೆ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳಲು ಸಹಕಾರಿ ಎಂದು ಶಿಕ್ಷಣ ಸಂಸ್ಥೆಗೆ ಕಟ್ಟಡದ ಮಹತ್ವವನ್ನು ಸೂಚ್ಯವಾಗಿ ತಿಳಿಸಿದರು. ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಕಾರ್ಯವನ್ನು ಶ್ಲಾಘಿಸುತ್ತ, ವಿದ್ಯಾರ್ಥಿಗಳು ಇತರ ಅಂಶಗಳಿಗೆ ಹೆಚ್ಚು ಗಮನ ನೀಡದೆ ವಿದ್ಯಾರ್ಜನೆಯೆಡೆಗೆ ಮಾತ್ರ ಗಮನ ನೀಡಿದಾಗ, ಜೀವನದಲ್ಲಿ ಆಕಾಶದೆತ್ತರಕ್ಕೆ ಏರಲು ಸಾಧ್ಯ” ಎಂದು ಕಿವಿಮಾತು ಹೇಳಿದರು.
ಇದನ್ನು ಓದಿ : PI Transfer / ಉತ್ತರ ಕನ್ನಡ ಜಿಲ್ಲೆಯ ಮೂವರು ಪಿಐ ವರ್ಗ
ಈ ಸಂದರ್ಭದಲ್ಲಿ ಮೆನೇಜಿಂಗ್ ಟ್ರಸ್ಟಿ ರವೀಂದ್ರ ಕೊಲ್ಲೆ ಸ್ವಾಗತಿಸುತ್ತ, ಪ್ರಾಸ್ತಾವಿಕವಾಗಿ ಮಾತನಾಡಿ, ಭಟ್ಕಳ ಎಜ್ಯುಕೇಶನ್ ಟ್ರಸ್ಟ ನಡೆದುಬಂದ ದಾರಿ ಹಾಗೂ ಇದರ ಮುನ್ನೋಟವನ್ನು ಪ್ರಸ್ತುತಪಡಿಸಿದರು. ಟ್ರಸ್ಟಿ ನಾಗೇಶ ಭಟ್ಟ ವಂದನಾರ್ಪಣೆ ಮಾಡಿದರು.
ಇದನ್ನು ಓದಿ : Urban Bank/ ಭಟ್ಕಳ ಅರ್ಬನ್ ಬ್ಯಾಂಕ್ಗೆ ಅಧ್ಯಕ್ಷ-ಉಪಾಧ್ಯಕ್ಷರಾಯ್ಕೆ
ಅಧ್ಯಕ್ಷ ಡಾ. ಸುರೇಶ ವಿ. ನಾಯಕ, ಉಪಾಧ್ಯಕ್ಷ ಸುರೇಂದ್ರ ಶ್ಯಾನುಭಾಗ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಟ್ರಸ್ಟಿಗಳಾದ ಶ್ರೀಧರ ಶ್ಯಾನಭಾಗ, ರಮೇಶ ಖಾರ್ವಿ, ಗುರುದತ್ತ ಶೇಟ, ಟ್ರಸ್ಟಿನ ಎಲ್ಲ ಅಂಗ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.
ಇದನ್ನು ಓದಿ : Editorial/ ಗೋ ಹತ್ಯೆ ಸಂಪೂರ್ಣವಾಗಿ ನಿಲ್ಲಲಿ