ಬೆಂಗಳೂರು: ಫೆಬ್ರವರಿ ೧ರಿಂದ ಎರಡು ದಿನಗಳ ಕಾಲ ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (weather forecast) ನೀಡಿದೆ. ತುಮಕೂರು, ಶಿವಮೊಗ್ಗ (Shivamogga), ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ (Dharwad), ಬಾಗಲಕೋಟೆ, ಉತ್ತರ ಕನ್ನಡ (Uttara Kannada), ದಕ್ಷಿಣ ಕನ್ನಡ(Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಆದರೆ, ಬೆಳಗಾವಿ(Belagavi), ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮುಂತಾದ ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ (Bengaluru) ಕೆಲವೆಡೆ ಮಂಜು ಕವಿದ ವಾತಾವರಣವಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಕಾರೈಕಲ್, ಕೇರಳ, ಕರಾವಳಿ (Coastal) ಆಂಧ್ರಪ್ರದೇಶದಲ್ಲೂ ಮಳೆಯಾಗುವ ಮುನ್ಸೂಚನೆ ಇದೆ (weather forecast). ವಿಜಯಪುರದಲ್ಲಿ ಕನಿಷ್ಠ ತಾಪಮಾನ ೧೧.೮ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ : Blood Donation/ ಭಟ್ಕಳದಲ್ಲಿ ರಕ್ತದಾನ ಶಿಬಿರ ಉದ್ಘಾಟನೆ