ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೇ ೭ರಂದು ಮತದಾನ ನಡೆಯಲಿದೆ. ಮತಯಂತ್ರದಲ್ಲಿ ಅಭ್ಯಥಿಗಳ ಹೆಸರು ಕನ್ನಡ ಭಾಷೆಯ ಜೊತೆಗೆ ಮರಾಠಿ ಭಾಷೆಯಲ್ಲಿಯೂ ಮುದ್ರಿಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಇದನ್ನೂ ಓದಿ : ಡಾ.ಅಂಜಲಿ ಸಹಿತ ಮೂವರಿಂದ ನಾಮಪತ್ರ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನ್ನಡ ಮತ್ತು ಮರಾಠಿ ಎರಡೂ ಭಾಷೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವ ಮತದಾರರು ಇದ್ದಾರೆ. ಮತದಾರರು ತಾವು ಮತ ಚಲಾಯಿಸಬೇಕಾದ ಅಭ್ಯರ್ಥಿಯ ಹೆಸರನ್ನು ಹುಡುಕುವಲ್ಲಿ ಗೊಂದಲಕ್ಕೆ ಒಳಗಾಗಬಾರದು. ತಾವು ಬಳಸುವ ಭಾಷೆಯಲ್ಲಿಯೇ ಗುರುತಿಸಲು ಅನುಕೂಲವಾಗುವಂತೆ, ಚುನಾವಣೆಯ ಅಂತಿಮ ಕಣದಲ್ಲಿ ಉಳಿಯವ ಅಭ್ಯರ್ಥಿಗಳನ್ನು ಹೆಸರನ್ನು ಮತಯಂತ್ರದಲ್ಲಿ ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮುದ್ರಿಸಲು ನಿರ್ದೇಶನ ನೀಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.